Karnataka Shakti Scheme: ಶಕ್ತಿ ಯೋಜನೆಯ ವಿರುದ್ಧ ಹೈ ಕೋರ್ಟ್ ಗೆ ಪಿಐಎಲ್ ಸಲ್ಲಿಸಿದ ಕಾನೂನು ವಿದ್ಯಾರ್ಥಿಗಳು!

Karnataka Shakti Scheme: ಕಾಂಗ್ರೆಸ್(Congress) ಪಕ್ಷದ 5 ಭರವಸೆಗಳಲ್ಲಿ ಒಂದಾದ ಶಕ್ತಿ ಯೋಜನೆ (Karnataka Shakti Scheme)ಯಶಸ್ವಿಯಾಗುತ್ತಿದೆ. ಈ ಯೋಜನೆಯ ಲಾಭ ಪಡೆಯುವ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಆದರೆ ಈ ಯೋಜನೆಯಿಂದ ಪ್ರಯೋಜನವಾಗುವಷ್ಟು ಅನಾನುಕೂಲತೆ ಸೃಷ್ಟಿಯಾಗಿದೆ.

 

Karnataka Shakti Scheme

 

ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ(Free Bus) ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಸಂಬಂಧಿಸಿದಂತೆ ಕಾನೂನು ವಿದ್ಯಾರ್ಥಿಗಳು ಸೋಮವಾರ ಹೈಕೋರ್ಟ್‌ನಲ್ಲಿ(High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)(PIL) ಸಲ್ಲಿಸಿದ್ದಾರೆ. ಉಚಿತ ಬಸ್ ಯೋಜನೆ ಜಾರಿಯಿಂದ ವಿದ್ಯಾರ್ಥಿಗಳು, ವಯೋವೃದ್ಧರು ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದ ಕಾನೂನು ವಿದ್ಯಾರ್ಥಿಗಳು ಸಮಸ್ಯೆ ಪರಿಹಾರಕ್ಕೆ ಹೈಕೋರ್ಟ್ ಮೊರೆ ಹೋಗಿದ್ದಾರೆ.

 

 

ಶಕ್ತಿ ಯೋಜನೆಯಿಂದಾಗಿ ಪ್ರತಿ ಬಸ್ಸಿನಲ್ಲಿ ಜನದಟ್ಟಣೆ ಹೆಚ್ಚಿದೆ. ಸಾರಿಗೆ ಬಸ್‌ಗಳಲ್ಲಿ ಸೀಟುಗಳಿಗಾಗಿ ಗಲಾಟೆ ನಡೆಯುತ್ತಿದೆ. ಹಿರಿಯ ನಾಗರಿಕರು, ಮಕ್ಕಳು ಬಸ್ ಹತ್ತಲಾಗದೆ ಪರದಾಡುತ್ತಿದ್ದಾರೆ ಎಂದು ಪಿಐಎಲ್ ನಲ್ಲಿ ತಿಳಿಸಲಾಗಿದೆ.ಕೆಲವೆಡೆ ಬಸ್ ಹತ್ತಲು ಸಾಧ್ಯವಾಗದೆ ವಿದ್ಯಾರ್ಥಿಗಳು ಬಸ್ ನಿಂದ ಬಿದ್ದ ಘಟನೆಗಳೂ ನಡೆದಿವೆ. ಜತೆಗೆ ಶಾಲಾ ಕಾಲೇಜು ಪರೀಕ್ಷೆಗಳಿಗೆ ನಿಗದಿತ ಸಮಯಕ್ಕೆ ವಿದ್ಯಾರ್ಥಿಗಳು ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

 

Karnataka Shakti Scheme

 

ಅಲ್ಲದೆ, ಒಂದೇ ವಾರದಲ್ಲಿ 100 ಕೋಟಿ ತೆರಿಗೆದಾರರ ಹಣವನ್ನು ಈ ಯೋಜನೆಗೆ ಬಳಸಲಾಗಿದೆ. ಅಂದರೆ ವರ್ಷಕ್ಕೆ 3200 ರಿಂದ 3400 ಕೋಟಿ ರೂಪಾಯಿ ನಷ್ಟವಾಗುತ್ತದೆ.ಅಲ್ಲದೆ ದೂರದ ಊರುಗಳಿಗೆ ವಾಹನ ನಿಲ್ಲಿಸಿ ಪ್ರಯಾಣಿಸಲು ಬಿಡಬಾರದು. ಜತೆಗೆ ಟಿಕೆಟ್ ಖರೀದಿಸಿದವರಿಗೆ ಶೇ.50ರಷ್ಟು ಸೀಟು ಮೀಸಲಿಡಬೇಕು ಎಂದು ಪಿಐಎಲ್ ನಲ್ಲಿ ಕೋರಲಾಗಿದೆ. ಇದಲ್ಲದೆ ವೃದ್ಧರ ಬಸ್ ಪ್ರವೇಶಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಕಾನೂನು ವಿದ್ಯಾರ್ಥಿಗಳು ಪಿಐಎಲ್ ಮೂಲಕ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ. ಸಾರಿಗೆ ಬಸ್‌ನಲ್ಲಿ ಮಕ್ಕಳು ಮತ್ತು ವೃದ್ಧರು.